Friday, September 19, 2008

ಮಕ್ಕಳಿಂದ ದೊಡ್ಡವರಿಗೆ ಬುದ್ಧಿ !

ಹುಬ್ಬಳ್ಳಿಯಿಂದ ನಮ್ಮ ವರದಿಗಾರ ಶರತ್ ಅವ್ರು ಇವತ್ತು ಒಂದು ವರದಿ ಕಳುಹಿಸಿದರು. ಹುಬ್ಬಳ್ಳಿ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ಶ್ರೀರಾಮ, ಏಸುಕ್ರಿಸ್ತ, ಅಲ್ಲಾನ ಫೋಟೋಗಳನ್ನು ಇರಿಸಿ ಆಯಾಯ ಧರ್ಮಗಳ ಆಚರಣೆಗಳ ಪ್ರಕಾರ ಪೂಜೆ ಪ್ರಾರ್ಥನೆ ಸಲ್ಲಿಸಿದ್ದಾರೆ. ನಿಜಕ್ಕೂ ವರದಿ ನೋಡಿ ತುಂಬ ಖುಷಿ ಆಯ್ತು. ಇದೇನು ಹೊಸ ವಿಷಯವಲ್ಲ, ಆದರೆ, ಈ ಸಂಧರ್ಭದಲ್ಲಿ ಆ ಮಕ್ಕಳ ಕಾರ್ಯ ತುಂಬ ಶ್ಲಾಘನೆಗೆ ಅರ್ಹವಾದದ್ದು.

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಅಶಾಂತಿ ಮನೆ ಮಾಡಿದೆ. ಕೋಮು-ಕೋಮುಗಳ ನಡುವೆ ಸಂಘರ್ಷ ನಡೆಯುತ್ತಿದೆ. ಒಂದು ರೀತಿಯಲ್ಲಿ ಯಾರೂ ಕೂಡಾ ವಿವೇಚನೆಯಿಂದ ವರ್ತಿಸುತ್ತಿರುವ ಹಾಗೆ ಕಂಡು ಬರುತ್ತಿಲ್ಲ. ಇಂತಹ ಸಂದರ್ಭದಲ್ಲಿ, ದೊಡ್ಡವರು, ದೊಡ್ದವರೆನ್ನಿಸಿಕೊಂದವರು, ದೊಡ್ಡವರೆಂದು ಕರೆದುಕೊಳ್ಳುತ್ತಿರುವವರಿಗೆ ಬುದ್ಧಿ ಹೇಳುವ ಕಾರ್ಯವನ್ನು ಈ ಮಕ್ಕಳು ಮಾಡಿದ್ದರೆ. ರಾಷ್ಟ್ರಕವಿ ಕುವೆಂಪು ಅವರ ಮನುಜ ಮತ ವಿಶ್ವ ಪಥ ಕಲ್ಪನೆಯನ್ನು ಸಾಕಾರಮಾಡಿದ್ದಾರೆ. ಜಾತಿ-ಜಾತಿಗಳ ನಡುವೆ, ಮತಗಳ ನಡುವೆ ವಿಷ ಬೀಜ ಬಿತ್ತುವವರು ಈ ಮಕ್ಕಳನ್ನು ನೋಡಿ ಕಲಿಯುವಂತಹದ್ದು ತುಂಬಾ ಇದೆ ಅನ್ನಿಸ್ತಿದೆ. ಆಲ್ವಾ ?

2 comments:

ಮಹೇಶ್ ಪುಚ್ಚಪ್ಪಾಡಿ said...

ಒಳ್ಳೆಯ ಪ್ರೆಸೆಂಟೇಶನ್ ಆಗಿತ್ತು.ಕಾರ್ಯಕ್ರಮ ಪೂರ್ತಿ ನೋದಿದ್ದೆ.

'ಪ್ರೀತು' ಕೆಮ್ಮಾಯಿ, said...

thank you